Cini NewsSandalwoodTV Serial

*ಸಸ್ಪೆನ್ಸ್ , ಕ್ರೈಂ ಕಥಾನಕ “ವರ್ಣತರಂಗ” ಚಿತ್ರದ ಹಾಡುಗಳ ಬಿಡುಗಡೆ*

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಕ್ರೈಂ , ಥ್ರಿಲ್ಲರ್ ಕಥಾನಕದ ಚಿತ್ರ ತೆರೆ ಮೇಲೆ ಬರಲು ಸಜ್ಜಾಗಿದೆ. ಯುವ ಪಡೆಗಳ ನಿರ್ಮಾಣದ *ವರ್ಣತರಂಗ* ಚಿತ್ರದ ಮೂರು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ *ಬಿ.ಶಿವಕುಮಾರ್ ಬಂಡವಾಳ* ಹೂಡಿರುವುದು ಮೂರನೇ ಅನುಭವ. ಸೆಲ್ವರಾಜ್ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. *ತೀರ್ಥೆಶ್ ಕೊರಮೇರು ಕಥೆ ಬರೆದು ನಿರ್ದೇಶನ* ಮಾಡಿದ್ದಾರೆ.

ಈ ಚಿತ್ರದಲ್ಲಿ *ಎಸಿಪಿ ಪಾತ್ರದಲ್ಲಿ ತಿಲಕ್ ನಾಯಕ. ಜೀವಿತಾ ನಾಯಕಿ* ಪತ್ರಕರ್ತೆಯಾಗಿ *ಸಾಕ್ಷಿ ಮೇಘನಾ ಉಪನಾಯಕಿ*. ಹ್ಯಾಕರ್ ಅಗಿ ವರ್ಧನ್. ಉಳಿದಂತೆ ಹೇಮಂತ್, ರಮೇಶ್ ಪಂಡಿತ್, ಬಲರಾಜವಾಡಿ, ಟೆನ್ನಿಸ್‌ಕೃಷ್ಣ, ಜಯರಾಮ್, ಬಿರಾದಾರ್, ಭಗತ್, ಸುಂದರ್‌ಭಟ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿರುವ ಮೂರು ಹಾಡುಗಳು ವಿಭಿನ್ನವಾಗಿ ಮೂಡಿ ಬಂದಿದ್ದು , ಬಾರ್‌ ನಲ್ಲಿ ಬರುವ ’ಸುಕ್ಕ ಸುಕ್ಕ’ ಗೀತೆಗೆ ಚಂದನ್‌ಶೆಟ್ಟಿ ಧ್ವನಿಯಾಗಿದ್ದಾರೆ. ಆಕಾಶ್‌ರೆಡ್ಡಿ -ಯಶವಂತ್‌ ಭೂಪತಿ ಸಂಗೀತ ನೀಡಿದ್ದು , ಛಾಯಾಗ್ರಹಣ ಮನುಗೌಡ, ಸಂಕಲನ ವೆಂಕಿ.ಯುಡಿವಿ, ಸಾಹಿತ್ಯ ವಿ.ಎನ್.ಸ್ವಾಮಿ- ಆಕಾಶ್‌ರೆಡ್ಡಿ – ಮಿಥುನ್‌ಸುವರ್ಣ, ಕಾರ್ಯಕಾರಿ ನಿರ್ಮಾಪಕ ಕೆ.ಬಾಲಸುಬ್ರಮಣ್ಯನ್, ಸಾಹಸ ಥ್ರಿಲ್ಲರ್‌ಮಂಜು – ಕುಂಗುಫೂ ಚಂದ್ರು-ನರಸಿಂಹ, ನೃತ್ಯ ನಾಗಿ-ಆನಂದ್ ಅವರದಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ಮೂಲಕ ವಿಎಫ್‌ಎಕ್ಸ್ ಟೆಕ್ನಿಷಿಯನ್ ಆಗಿದ್ದು, ಕಿರುಚಿತ್ರ ಸಿದ್ದಗೊಳಿಸಿದ್ದೇನೆ. ವರ್ಣತರಂಗ ಅಂದರೆ ಬಣ್ಣಗಳ ಅಲೆಗಳು ಎಂಬರ್ಥ ಕೊಡುತ್ತದೆ. ಒಬ್ಬ ವ್ಯಕ್ತಿ ಕಲರ್ ಫುಲ್ ಆಗಿ ನಿಜ ಜೀವನದಲ್ಲಿ ಹೇಗಿರುತ್ತಾನೆ? ಆತ ನಕರಾತ್ಮಕವಾಗಿ ಚಿಂತನೆ ಮಾಡುತ್ತಾ, ಯಾವ ರೀತಿಯಲ್ಲಿ ಸೇಡು ತೀರಿಸಿಕೊಳ್ಳುತ್ತಾನೆ? ಸಿನಿಮಾದಲ್ಲಿ ಸಾಕಷ್ಟು ಕುತೂಹಲಗಳು ಇರುವುದರಿಂದ ಇಷ್ಟನ್ನು ಮಾತ್ರ ಹೇಳಬಹುದು. ಬೆಂಗಳೂರು, ಮಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ವಿಎಫ್‌ಎಕ್ಸ್ ಶೇಕಡ ಇಪ್ಪತ್ತೈದರಷ್ಟು ಬರುತ್ತದೆ. ಮಾಧ್ಯಮದವರ ಸಹಕಾರಬೇಕೆಂದು ಕೋರಿದರು.

ನಾನು ಈಗಾಗಲೇ ಎಸಿಪಿಯಾಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ಇದರಲ್ಲೂ ಅದೇ ಪಾತ್ರವಿದ್ದರೂ ಕೇಸ್ ಬೇರೆಯದೆ ಆಗಿರುತ್ತದೆ. ಅದರಿಂದ ನೋಡುಗರಿಗೆ ಬೋರ್ ಅನಿಸುವುದಿಲ್ಲವೆಂದು ತಿಲಕ್ ಮಾಧ್ಯಮದ ಪ್ರಶ್ನೆಗೆ ಉತ್ತರವಾದರು. ಇನ್ನುಳಿದಂತೆ ಚಿತ್ರದ ಕಲಾವಿದರಾದ ವರ್ಧನ್ , ಸಾಕ್ಷಿ ಮೇಘನ , ಭಜರಂಗಿ ಪ್ರಸನ್ನ ಚಿತ್ರದ ಕುರಿತು ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡರು. ಹಾಗೆ ಚಿತ್ರದ ನಿರ್ಮಾಪಕರಾದ ಶಿವಕುಮಾರ್. ಬಿ , ಸಹನಿರ್ಮಾಪಕ ಸೆಲ್ವರಾಜ್ , ಸಂಗೀತ ನಿರ್ದೇಶಕರು ಚಿತ್ರದ ಕುರಿತು ಒಂದಷ್ಟು ಮಾಹಿತಿಯನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದಂತಹ ಕರವೇ ಉಪಾಧ್ಯಕ್ಷ ಅಂಜನಪ್ಪ , ಬಂಜಾರ ಸಮುದಾಯದ ಮುಖಂಡ ಗೋಪಾಲಯ್ಯ , ಹಾಗೂ ಮಿಥುನ್ ಸುವರ್ಣ ಸೇರಿದಂತೆ ಹಲವು ಚಿತ್ರತಂಡಕ್ಕೆ ಶುಭವನ್ನ ಕೋರಿದರು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದು ನವಂಬರ್ ತಿಂಗಳಲ್ಲಿ ಚಿತ್ರವನ್ನ ತೆರೆಗೆ ತರಲು ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

error: Content is protected !!