Customize Consent Preferences

We use cookies to help you navigate efficiently and perform certain functions. You will find detailed information about all cookies under each consent category below.

The cookies that are categorized as "Necessary" are stored on your browser as they are essential for enabling the basic functionalities of the site. ... 

Always Active

Necessary cookies are required to enable the basic features of this site, such as providing secure log-in or adjusting your consent preferences. These cookies do not store any personally identifiable data.

No cookies to display.

Functional cookies help perform certain functionalities like sharing the content of the website on social media platforms, collecting feedback, and other third-party features.

No cookies to display.

Analytical cookies are used to understand how visitors interact with the website. These cookies help provide information on metrics such as the number of visitors, bounce rate, traffic source, etc.

No cookies to display.

Performance cookies are used to understand and analyze the key performance indexes of the website which helps in delivering a better user experience for the visitors.

No cookies to display.

Advertisement cookies are used to provide visitors with customized advertisements based on the pages you visited previously and to analyze the effectiveness of the ad campaigns.

No cookies to display.

Cini NewsSandalwood

ಅದ್ದೂರಿಯಾಗಿ ನಡೆದ ಶ್ರೀ ರಾಘವೇಂದ್ರ ಚಿತ್ರವಾಣಿ 48ನೇ ವಾರ್ಷಿಕೋತ್ಸವ ಹಾಗೂ 23ನೇ ಪ್ರಶಸ್ತಿ ಪ್ರದಾನ ಸಮಾರಂಭ

ಸುಂದರ ಸಂಜೆಯ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮಕ್ಕೂ ಮುನ್ನ ಗಾಯಕಿ ಜ್ಯೋತಿ ರವಿಪ್ರಕಾಶ್ ಅವರಿಂದ ಹಳೆಯ ಚಿತ್ರಗಳ ಗಾಯನ ಮನಸೆಳೆದಿದ್ದು, ನಂತರ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಸ್ವಾಗತ ಭಾಷಣ ಮೂಲಕ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಇನ್ನು ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಬಾರಿ ಶ್ರೀರಾಘವೇಂದ್ರ ಚಿತ್ರವಾಣಿಯಿಂದ ನೀಡಲಾಗುವ ನಿರ್ಮಾಪಕರ ಪ್ರಶಸ್ತಿಯನ್ನು ಮರಣೋತ್ತರವಾಗಿ ನಿರ್ಮಾಪಕ ರಾಮು ಅವರಿಗೆ ನೀಡಲಾಯಿತು. ರಾಮು ಅವರ ಪತ್ನಿ ಮಾಲಾಶ್ರೀ ಪ್ರಶಸ್ತಿ ಸ್ವೀಕರಿಸಿದರು. ಶ್ರೀರಾಘವೇಂದ್ರ ಚಿತ್ರವಾಣಿಯಿಂದ ಪತ್ರಕರ್ತರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಮುರಳೀಧರ ಖಜಾನೆ ಅವರಿಗೆ ನೀಡಲಾಯಿತು.

ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಬಿ.ಎನ್‍. ಸುಬ್ರಹ್ಮಣ್ಯ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಅನೇಕ ಗಣ್ಯರು ವಿವಿಧ ಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಆ ಪೈಕಿ ಈ ಬಾರಿ ಭಾರತಿ ವಿಷ್ಣುವರ್ಧನ್ ಅವರು ನಿರ್ದೇಶಕರಿಗೆ ನೀಡುವ ದಿ.ಆರ್ ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿಯನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ, ಡಾ||ರಾಜಕುಮಾರ್ ಅವರ ಕುಟುಂಬದಿಂದ ಗಾಯಕರಿಗೆ ನೀಡುವ ಪ್ರಶಸ್ತಿಯನ್ನು ಹೇಮಂತ್ ಅವರಿಗೆ, ಎಂ.ಎಸ್.ರಾಮಯ್ಯ ಚಿತ್ರಾಲಯದಿಂದ ಪಟ್ಟಾಭಿರಾಮ್ ಅವರು ಸಂಗೀತ ನಿರ್ದೇಶಕರಿಗೆ ನೀಡುವ ಪ್ರಶಸ್ತಿಯನ್ನು “ಹೊಂದಿಸಿ ಬರೆಯಿರಿ” ಚಿತ್ರಕ್ಕಾಗಿ ಜೋಕೋಸ್ಟ ಅವರಿಗೆ, ಹಿರಿತೆರೆ, ಕಿರುತೆರೆ ಹಾಗೂ ರಂಗಭೂಮಿ ಕಲಾವಿದ ಬಿ.ಸುರೇಶ್ ಅವರು ಪ್ರಥಮ ಚಿತ್ರದ ನಿರ್ದೇಶಕರಿಗೆ ನೀಡುವ ಪ್ರಶಸ್ತಿಯನ್ನು “ಆಚಾರ್ & ಕೋ” ಚಿತ್ರದ ನಿರ್ದೇಶನಕ್ಕಾಗಿ ಸಿಂಧೂ ಶ್ರೀನಿವಾಸಮೂರ್ತಿ ಅವರಿಗೆ, ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ದಿ.ಕೆ.ವಿ.ಜಯರಾಂ ಸ್ಮರಣಾರ್ಥ ಅವರ ಪತ್ನಿ ನಿರ್ಮಾಪಕಿ ಮೀನಾಕ್ಷಿ ಜಯರಾಂ ಅವರು ಉತ್ತಮ ಕಥಾಲೇಖಕರಿಗೆ ನೀಡುವ ಪ್ರಶಸ್ತಿಯನ್ನು “ಸಪ್ತಸಾಗರದಾಚೆ ಎಲ್ಲೋ” ಚಿತ್ರಕ್ಕಾಗಿ ಹೇಮಂತ್ ರಾವ್ ಅವರಿಗೆ, ಹಿರಿಯ ಚಿತ್ರಸಾಹಿತಿ ಹಾಗೂ ನಿರ್ದೇಶಕ ದಿ.ಹುಣಸೂರು ಕೃಷ್ಣಮೂರ್ತಿ ಅವರ ಸ್ಮರಣಾರ್ಥ ಅವರ ಮಗ ಎಸ್.ಕೆ ನರಹರಿ ಅವರು ಉತ್ತಮ ಸಂಭಾಷಣೆಗಾಗಿ ನೀಡುವ ಪ್ರಶಸ್ತಿಯನ್ನು “ವಿರಾಟಪುರದ ವಿರಾಗಿ” ಚಿತ್ರಕ್ಕಾಗಿ ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರಿಗೆ ಹಾಗೂ ಪತ್ರಕರ್ತ ದಿ.ಸಿ.ಸೀತಾರಾಮ್ ಸ್ಮರಣಾರ್ಥ ಪೋಷಕನಟರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ನಟ ಸುಂದರರಾಜ್ ಅವರಿಗೆ, ನಟಿ ಡಾ||ಜಯಮಾಲ ಹೆಚ್ ಎಂ ರಾಮಚಂದ್ರ ಅವರು ಪೋಷಕನಟಿ ಅವರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ನಟಿ ದುಬೈ ಜಯಲಕ್ಷ್ಮಿ ಅವರಿಗೆ ಹಾಗೂ ಪತ್ರಕರ್ತ ವಿನಾಯಕರಾಮ್ ಅವರು ಹಿರಿಯ ಪತ್ರಕರ್ತ. ದಿ.ಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಗೀತರಚನೆಕಾರಿಗೆ ನೀಡುವ ಪ್ರಶಸ್ತಿಯನ್ನು ನಟ ಡಾಲಿ ಧನಂಜಯ ಅವರಿಗೆ “ಟಗರು ಪಲ್ಯ” ಚಿತ್ರದ “ಸಂಬಂಜ ಅನ್ನೊದು ದೊಡ್ದು ಕನಾ” ಗೀತರಚನೆಗಾಗಿ ನೀಡಿ ಗೌರವಿಸಲಾಯಿತು.

error: Content is protected !!