Cini NewsSandalwood

“ಶರಣರ ಶಕ್ತಿ” ಹಾಡುಗಳು ಬಿಡುಗಡೆ ಮಾಡಿದ ಗಣ್ಯರು.

ಹನ್ನೆರಡನೇ ಶತಮಾನದಲ್ಲಿ ಶರಣರು, ಅನುಭವ ಮಂಟಪ ಮತ್ತು ಬಸವಣ್ಣ ಎನ್ನುವುದು ಎಷ್ಟು ಆಕರ್ಷಕವಾಗಿತ್ತು. ಇಂತಹ ಅಂಶಗಳನ್ನು ಸಂಶೋಧನೆ ನಡೆಸಿ ’ಶರಣರ ಶಕ್ತಿ’ ಎನ್ನುವ ಚಿತ್ರವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದೆ. ’ತಡಿವ್ಯರ ನೋಡು’ ಎಂಬ ಅಡಿಬರಹವಿದೆ. ಪ್ರಚಾರದ ಮೊದಲ ಹಂತವಾಗಿ ’ಬಸವ ಜಯಂತಿ’ ಮುನ್ನ ದಿನದಂದು ಹಾಡು ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.

ಎಲ್ಲಾ ಕಲಾವಿದರುಗಳು ಪಾತ್ರಧಾರಿಗಳಾಗಿ ವೇದಿಕೆ ಹಂಚಿಕೊಂಡಿದ್ದು ವಿಶೇಷವಾಗಿತ್ತು. ಶ್ರೀಷ ಫಿಲಂಸ್ ಅಡಿಯಲ್ಲಿ ಆರಾಧನಾ ಕುಲಕರ್ಣಿ ಬಂಡವಾಳ ಹೂಡುವ ಜತೆಗೆ ಅಕ್ಕ ನಾಗಮ್ಮನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡಾ.ರಾಜ್‌ಕುಮಾರ್ ಸಂಸ್ಥೆಯ ವಜ್ರೇಶ್ವರಿ ಕಂಬೈನ್ಸ್‌ದಲ್ಲಿ ಕೆಲಸ ಮಾಡಿರುವ ದಿಲೀಪ್ ಶರ್ಮ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಅಲ್ಲದೆ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಅನುಭವ ಮಂಟಪದ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಮಾತನಾಡಿ ಬಸವಣ್ಣ ಇಂದಿಗೂ ಯಾಕೆ ಪ್ರಸ್ತುತ ಎಂಬುದನ್ನು ಇದರಲ್ಲಿ ನಿರೂಪಣೆ ಮಾಡಿದ್ದಾರೆಂಬುದು ತಿಳಿದು ಬಂದಿದೆ. ಅವರು ಧಾರ್ಮಿಕ, ಶೈಕ್ಷಣಿಕ, ಸಾಂಸ್ಕ್ರತಿಕ, ಸಾಮಾಜಿಕ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ಬಸವಣ್ಣನವರು ಸಾರ್ವಕಾಲಿಕವಾದವರು. ಸರ್ಕಾರವು ನೂತನ ಅನುಭವ ಮಂಟಪ್ಪಕ್ಕೆ ಹಣ ಮಂಜೂರು ಮಾಡಿದೆ. ಕೆಲಸಗಳು ಸದ್ಯದಲ್ಲೆ ಶುರುವಾಗಲಿದೆ. ಚಿತ್ರವು ಎಲ್ಲರಿಗೂ ತಲುಪಲಿ ಎಂದರು.

ಹನ್ನೆರಡನೇ ಶತಮಾನದಲ್ಲಿ ರಾಜ್ಯ,ದೇಶ, ವಿದೇಶಗಳಿಂದ ಬಸವಣ್ಣನವರನ್ನು ಹುಡುಕಿಕೊಂಡು ಬಂದಿದ್ದರಿಂದಲೇ ವಿಶ್ವಖ್ಯಾತಿಗೊಂಡರು. ಅವರು ಉತ್ತರ ಕರ್ನಾಟಕ ಭಾಗದವರು ಎಂಬುದು ಹೆಮ್ಮೆಯ ವಿಷಯವಾಗಿದೆ. ಯಾವ ಕಾರಣಕ್ಕೆ ಎಲ್ಲಾ ಶರಣರು ಅನುಭವ ಮಂಟಪಕ್ಕೆ ಬಂದರು. ಇಲ್ಲಿ ಮಹಾನ್ ಪುರುಷನ ಅವತಾರ ಹೇಗಿತ್ತು. ಇಲ್ಲಿಗೆ ಬಂದವರು ಮೂರು ದಿವಸದ ನಂತರ ಕಾಯಕ ಹುಡುಕುವಂತೆ ಮಾಡುತ್ತದೆ. ಬಸವಣ್ಣನವರ ಕಲ್ಯಾಣ ಕ್ರಾಂತಿ, ವಚನ ಸಾಹಿತ್ಯ ರಕ್ಷಣೆ ಮಾಡಲು ಹೇಗೆ ಹೋರಾಡಿದರು. ಎಲ್ಲೆಲ್ಲಿ ವಚನಗಳನ್ನು ಬಚ್ಚಿಟ್ಟರು.

ಅದನ್ನು ಜನರಿಗೆ ಯಾವ ರೀತಿ ಹರಡಿದರು. ವೇಶ್ಯೆ ಸಂಕವ್ವ ಮಹಾಶರಣೆ ಯಾಗಿದ್ದು. ತಳವಾರು ಕಾಮಿದೇವ ಶರಣರು ಯಾಕೆ ಕಲ್ಯಾಣಕ್ಕೆ ಬಂದರು. ಚನ್ನಬಸವಣ್ಣನ ಸಾರಥ್ಯದಲ್ಲಿ ಉಳಿವೆ ಮಂಟಪ. ಶರಣರನ್ನು ತಡೆ ಹಿಡಿದರೆ ಏನಾಗುತ್ತದೆ. ಇಂತಹ ಇನ್ನು ಹಲವಾರು ತಿಳಿಯದ ಮಾಹಿತಿಗಳು ಚಿತ್ರದಲ್ಲಿ ನೋಡಬಹುದಾಗಿದೆ ಅಂತ ನಿರ್ದೇಶಕರು ಹೇಳಿಕೊಂಡರು.

ಬಸವಣ್ಣನಾಗಿ ಮಂಜುನಾಥಗೌಡ ಪಾಟೀಲ್, ನೀಲಾಂಬಿಕೆಯಾಗಿ ಸಂಗೀತ ಮಡ್ಲೂರು, ಶೀಲವಂತನಾಗಿ ವಿಶ್ವರಾಜ್ ರಾಜ್‌ಗುರು, ಚನ್ನಬಸವಣ್ಣನಾಗಿ ಧ್ರುವಶರ್ಮ, ಉಳಿದಂತೆ ರಮೇಶ್‌ಪಂಡಿತ್, ಸಾಚಿಜೈನ್, ವಿನೋದ್ ದಂಡಿನ, ರಾಮಕೃಷ್ಣ ದೊಡ್ಡಮನಿ, ಅಬ್ದುಲ್‌ಲತೀಫ್ ಹಾಗೂ ಆ ಭಾಗದ 140 ರಂಗಭೂಮಿ ಕಲಾವಿದರುಗಳಿಗೆ ಅವಕಾಶ ಮಾಡಿಕೊಡಲಾಗಿದೆ.

ಸಂಗೀತ ವಿನು ಮನಸು, ಛಾಯಾಗ್ರಹಣ ಮುಂಜಾನೆ ಮಂಜು, ಸಂಕಲನ ಮಹಾಂತೇಶ್.ಆರ್ ನಿರ್ವಹಿಸಿದ್ದಾರೆ. ಹುಬ್ಬಳ್ಳಿ ಸುತ್ತಮುತ್ತ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಹಾಡುಗಳನ್ನು Hoptil Musicದಲ್ಲಿ ಆಲಿಸಬಹುದಾಗಿದೆ. ಋಷಿಕುಮಾರ ಸ್ವಾಮೀಜಿ, ’ಹಲಗಿ’ ವಾದ್ಯ ಬಾರಿಸುವುದರಲ್ಲಿ ಹೆಸರು ಮಾಡಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿರುವ ಮುನಿವೆಂಕಟಪ್ಪ ಸುಂದರ ಸಮಯದಲ್ಲಿ ಉಪಸ್ತಿತರಿದ್ದರು.

error: Content is protected !!